ಬಿಜೆಪಿಯಿಂದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆ ಬಿಡುಗಡೆ

ಗುರುವಾರ, 11 ಮೇ 2017 (13:26 IST)
ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಗೊಳಿಸಿದ್ದು "ತೋರಿಸಿದ್ದು ಭರವಸೆಯ ಬೆಟ್ಟ ಜನರಿಗೆ ದೊರೆಕಿದ್ದು ಬರೀ ಕಷ್ಟ" ಎನ್ನುವ ಹೆಸರಲ್ಲಿ ಬಿಡುಗಡೆ ಮಾಡಿದೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ನಾಲ್ಕು ವರ್ಷಗಳ ಸಾಧನೆ, ವಿಫಲತೆಯ ಬಗ್ಗ ಅಂಕಿ ಅಂಕಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
 
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಕ್ಕಿಂತ ಮುಂಚೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಒಂದು ವೇಳೆ ನಾವು ಅಧಿಕಾರಕ್ಕೆ ಬಂದಲ್ಲಿ ಇಂತಹ ಅಕ್ರಮಗಳನ್ನು ತಡೆಯತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಅಕ್ರಮಗಳ ಸರಮಾಲೆ ನಡೆದಿವೆ ಎಂದು ಆರೋಪಿಸಿದರು.
 
ಕೃಷ್ಣ ಬೇಸಿನ್‌ಗೆ 10 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಸರಕಾರ ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ