ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸಿಎಂ ಬೊಮ್ಮಾಯಿರಿಂದ ಚಾಲನೆ

ಸೋಮವಾರ, 6 ಮಾರ್ಚ್ 2023 (19:37 IST)
ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ವಿಜಯ ಸಂಕಲ್ಪ ರಥಯಾತ್ರೆಯನ್ನ ಹಮ್ಮಿಕೊಂಡಿದ್ದು, ಬಸವರಾಜ್ ಬೊಮ್ಮಾಯಿ ರಥಯಾತ್ರೆಗೆ ಚಾಲನೆ ನೀಡಿದ್ದಾರೆ. ಬಸವನಗುಡಿಯ ಗವಿ ಗಂಗಾಧರೇಶ್ವರ ದೇವಸ್ಥಾನದಿಂದ ರಥಯಾತ್ರೆ ಪ್ರಾರಂಭವಾಗಿದೆ.ಗವಿ ಗಂಗಾಧರನಿಗೆ ಪೂಜೆ ಸಲ್ಲಿಸಿ ರಥಯಾತ್ರೆಯನ್ನ ಅಶೋಕ್ ಟೀಮ್ ಪ್ರಾರಂಭಿಸಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಅಶ್ವಥ್ ನಾರಾಯಣ್, ಸ್ಥಳೀಯ ಶಾಸಕ ರವಿ ಸುಬ್ರಹ್ಮಣ್ಯ, ಸಂಸದ ಪಿಸಿ ಮೋಹನ್ ಸೇರಿ ಹಲವರು ಭಾಗಿಯಾಗಿದ್ದಾರೆ.ರಥಯಾತ್ರೆಯಲ್ಲಿ  ಸಿಎಂ ಬಸವರಾಜ್ ಬೊಮ್ಮಾಯಿ ಭಾಗವಹಿಸಿದ್ರು.ಅಲ್ಲದೆ ರಥಯಾತ್ರೆಯಲ್ಲಿ  ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನೂರಾರು ಜನರ ಜೊತೆ ನಡೆದುಕೊಂಡು ರಥಯಾತ್ರೆಯಲ್ಲಿ ಭಾಗಿಯಾಗಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ