ಬಿಜೆಪಿಯವರು ಕ್ಷಮೆ ಕೇಳಬೇಕು -ದಿನೇಶ್ ಗುಂಡೂರಾವ್

ಗುರುವಾರ, 6 ಅಕ್ಟೋಬರ್ 2022 (16:54 IST)
ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬಹಿರಂಗ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಪರೇಶ್ ಮೇಸ್ತಾ ಸಾವನ್ನು ಧಾರ್ಮಿಕ ಹತ್ಯೆ ಎಂದು ಬಿಂಬಿಸಿದ್ದ ಬಿಜೆಪಿಯವರು ಇಡೀ ಕರಾವಳಿಯನ್ನೇ ಕೋಮುದಳ್ಳುರಿಗೆ ತಳ್ಳಿದ್ದರು.ಅಂದಿನ ನಮ್ಮ ಸರಕಾರ ಯಾವ ಹಿಂಜರಿಕೆಯೂ ಇಲ್ಲದೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
ಮೇಸ್ತಾ ಸಾವು ಸ್ವಾಭಾವಿಕ ಎಂದು ನ್ಯಾಯಾಲಯಕ್ಕೆ ವರದಿ ನೀಡಿದೆ. ಈಗ ಎಲ್ಲಿದ್ದಾರೆ ಬಿಜೆಪಿಯ ಕೂಗುಮಾರಿ ನಾಯಕರು?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೇಶ್ ಮೇಸ್ತಾ ಸಾವು ಸ್ವಾಭಾವಿಕ ಎಂದು ಸಿಬಿಐ ತನಿಖೆಯಿಂದ ಗೊತ್ತಾಗಿದೆ. ಆದರೆ ಈ ಸಾವನ್ನು ರಾಜಕೀಯಗೊಳಿಸಿ ದೊಂಬಿ ಎಬ್ಬಿಸಿದ್ದ ಬಿಜೆಪಿಯವರು ನಿಜವಾದ ಸಮಾಜ ಘಾತಕರಲ್ಲವೆ? ಸುಳ್ಳು ಅಪಾದನೆ ಮಾಡಿದ ಶಾಂತಿ ಭಂಗ ಮಾಡಿದ್ದು ಅಪರಾಧವಲ್ಲವೆ? ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬಹಿರಂಗ ಕ್ಷಮೆ ಕೇಳಲಿ" ಎಂದು ಅವರು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ