ಬಿಜೆಪಿ ಕಾರ್ಯಕಾರಣಿ ಸಭೆ ಆರಂಭ

ಭಾನುವಾರ, 12 ಫೆಬ್ರವರಿ 2017 (11:38 IST)
ಬೆಂಗಳೂರು: ಹಲವು ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ಪ್ರಮುಖರೆಲ್ಲಾ ಇಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಭೆ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರೆಲ್ಲಾ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
 

ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು,  ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಹೋರಾಡಲು ಹಾಗೂ ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುವ ಕುರಿತಂತೆ ಈ ಸಭೆಯಲ್ಲಿ ಪ್ರಮುಖರೆಲ್ಲಾ ಸೇರಿ ಚರ್ಚಿಸಲಿದ್ದಾರೆ.

ಡಿ.ವಿ. ಸದಾನಂದ ಗೌಡ,  ಅನಂತ ಕುಮಾರ್,  ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಎಲ್ಲಾ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ