ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಬೆಂಗಳೂರಿಗೆ

ಶನಿವಾರ, 2 ಸೆಪ್ಟಂಬರ್ 2017 (17:23 IST)
ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಜಾವ್ಡೇಕರ್, ನಾಡಿದ್ದು ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಅಂದೇ ರಾಜಕೀಯ ವ್ಯವಹಾರಗಳ ಸಮಿತಿ ಸಬೆ ಕೂಡಾ ನಿಗದಿ ಪಡಿಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ರಾಜ್ಯ ಸರಕಾರದ ವೈಫಲ್ಯಗಳನ್ನು ಯಾವ ರೀತಿ ಜನತೆಯ ಮುಂದೆ ಇಡಬೇಕು. ವೈಫಲ್ಯಗಳ ವಿರುದ್ಧ ಯಾವ ರೀತಿ ಹೊರಾಟ ಮಾಡಬೇಕು ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಕೇಂದ್ರದ ಮುಖಂಡರಾದ ಪಿಯೂಷ್ ಗೋಯಲ್ ಮತ್ತು ಪ್ರಕಾಶ್ ಜಾವ್ಡೇಕರ್, ರಾಜ್ಯ ಬಿಜೆಪಿಯನ್ನು ಯಾವ ರೀತಿ ಚುನಾವಣೆಗೆ ಸಿದ್ದ ಪಡಿಸುತ್ತದೆ ಎನ್ನುವುದು ಕಾದು ನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ