ಶಿವಮೊಗ್ಗ ನಗರದಲ್ಲಿ ಇಂದು ಬಿಜೆಪಿ ರಾಜ್ಯ ವಿಶೇಷ ಸಭೆ

ಭಾನುವಾರ, 3 ಜನವರಿ 2021 (11:01 IST)
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಿಜೆಪಿ ರಾಜ್ಯ ವಿಶೇಷ ಸಭೆ ನಡೆಸಲಾಗಿದ್ದು, ಈ ಸಭೆಗೂ ಬಿಜೆಪಿ ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ.

ಸಭೆಗೂ ಮುನ್ನ ಸಿಎಂ ಬಿಎಸ್ ಯಡಿಯೂರಪ್ಪ  ಬಿಜೆಪಿ ಧ್ವಜಾರೋಹಣ ಮಾಡಿ ಬಳಿಕ ಗೋಪೂಜೆ ನೇರವೆರಿಸಿದ್ದಾರೆ. ಈ ಸಬೇಯಲ್ಲಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. 
ಕಾರ್ಯಕ್ರಮವನ್ನುದ್ದೇಶಿಸಿದ ಮಾತನಾಡಿದ ಸಿಎಂ ಯಡಿಯೂರಪ್ಪ , ಗ್ರಾ.ಪಂ. ಚುನಾವಣಾ ಫಲಿತಾಂಶ ಉತ್ಸಾಹ ತಂದಿದೆ.

ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತಂದಿದೆ. ನಮ್ಮ ಮುಂದಿನ ಗುರಿ ತಾ.ಪಂ., ಜಿ.ಪಂ. ಚುನಾವಣೆ. ಮುಂದಿನ ಎರಡೂವರೆ ವರ್ಷ ಪಕ್ಷ ಸಂಘಟನೆ ಕೆಲಸ ಮಾಡಲಿದ್ದೇವೆ.  ವಿಧಾನ ಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಯಾವುದೂ ಅಸಾಧ್ಯವಲ್ಲ. ನಿಮ್ಮ ನಿರೀಕ್ಷೆ, ಅಪೇಕ್ಷೆಗೆ ತಕ್ಕಂತೆ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಸರಿ ದಾರಿಯಲ್ಲಿ ನಡೆದು ಎಲ್ಲರೂ ಪಕ್ಷ ಕಟ್ಟುವ ಸಂಕಲ್ಪ ಮಾಡಬೇಕೆಂದು  ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ