ಬಿಜೆಪಿಯದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ : ಸಿದ್ದರಾಮಯ್ಯ

ಭಾನುವಾರ, 31 ಜನವರಿ 2016 (16:08 IST)
ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ವಿರುದ್ಧ ಮಾಡಿದ ಆರೋಪಕ್ಕೆ  ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.  ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ರಾಜ್ಯ ಬಿಜೆಪಿ ನಾಯಕರು ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ. ಪ್ರಧಾನಿ ಮೋದಿ ನೇತೃತ್ವದ ಎಲ್ಲಾ ಸಭೆಗೆ ಹಾಜರಾಗಿದ್ದೆ.  ನಾನೇ ರಾಜ್ಯದ ನಿಯೋಗವನ್ನು ಪ್ರಧಾನಿ ಬಳಿಗೆ ಕರೆದೊಯ್ದಿದ್ದೆ ಎಂದು  ಸಿದ್ದರಾಮಯ್ಯ ಹೇಳಿದರು.

ಭೂಸ್ವಾಧೀನ ಕಾಯ್ದೆ ವಿರೋಧಿಸಿ  ಪ್ರಧಾನಿ ನೇತೃತ್ವದ ನೀತಿ ಆಯೋಗದ ಸಭೆಗೆ ಮಾತ್ರ ಗೈರಾಗಿದ್ದೆ. ಯೋಜನೆ ಸಂಬಂಧ ಮತ್ತೆ ಪ್ರಧಾನಿಗೆ ಪತ್ರ ಬರೆಯುವೆ,  ಡಿವಿಎಸ್‌ಗೆ ಸುಳ್ಳು ಹೇಳುವುದು ಬಿಟ್ಟು ಬೇರೇನೂ ಬರಲ್ಲ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ