ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಕಾರ್ಪೋರೇಟರ್ಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ.
ಪಕ್ಷೇತರರನ್ನು ಖರೀದಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು ಜೆಡಿಎಸ್ ಕಾರ್ಪೋರೇಟರ್ಗಳಿಗೂ ಗಾಳ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದು ಅಧಿಕಾರ ಪಡೆಯಲು ಯಾವ ಹೀನ ತಂತ್ರಗಳನ್ನು ರೂಪಿಸಲು ಹಿಂದೆ ಸರಿಯುವುದಿಲ್ಲ ಎಂದು ಗುಡುಗಿದ್ದಾರೆ.
ಪುಲಕೇಶಿ ನಗರದ ಜೆಡಿಎಸ್ ಶಾಸಕರ ನೇತೃತ್ವದಲ್ಲಿ 14 ಮಂದಿ ಕಾರ್ಪೋರೇಟರ್ಗಳನ್ನು ಕೇರಳದ ಕೊಚ್ಚಿಗೆ ಪ್ರವಾಸಕ್ಕಾಗಿ ಕಳುಹಿಸಲಾಗಿದೆ ಎಂದು ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.