ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಬಿಜೆಪಿಯಿಂದಾಗದು- ರಾಹುಲ್ ಗಾಂಧಿ ಸ್ಪಷ್ಟನೆ

ಶನಿವಾರ, 13 ಜುಲೈ 2019 (06:14 IST)
ಅಹಮದಾಬಾದ್ : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಬಲ, ಅಧಿಕಾರ ಬಲ, ಬೆದರಿಕೆ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ರಾಜ್ಯ ಸರಕಾರಗಳನ್ನು ಉರುಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಬಿಕ್ಕಟ್ಟಿಗೆ ಸಿಲುಕಿಸಲಾಗಿದೆ. ಇದಕ್ಕೆ ಬಿಜೆಪಿ ವರಿಷ್ಠ ನಾಯಕರ ಕುಮ್ಮಕ್ಕಿದೆ ಎಂದು ಕಿಡಿಕಾರಿದ್ದಾರೆ.


ಇದೇ ರೀತಿ ಗೋವಾ ಮತ್ತು ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಸರಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ. ಎಲ್ಲ ಬೆಳವಣಿಗೆಗಳು ಸ್ಪಷ್ಟವಾಗಿದೆ. ಬಿಜೆಪಿಯು ಇದೇ ರೀತಿ ಎಲ್ಲಡೆ ಮಾಡುತ್ತಿರುವುದು ಅಧಿಕಾರದ ಸಂಪೂರ್ಣ ದುರುಪಯೋಗ ಆಗುತ್ತಿದ್ದಕ್ಕೆ ಸಾಕ್ಷಿಯಾಗಿದೆ. ಆದರೆ ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಆಗದು ಎಂದು ರಾಹುಲ್‌ ಗಾಂಧಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ