ಬಿಜೆಪಿಯ ಹಿಂದುಳಿದ ವರ್ಗಗಳ ಏಕತಾ ಸಮಾವೇಶ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ನೀಡಿರುವ 150 ಸ್ಥಾನಗಳಲ್ಲಿ ಜಯಭೇರಿಯಾಗಲು ಈಗಿನಿಂದಲೇ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಎಪಿಎಂಸಿ ಚುನಾವಣೆ ಆರಂಭವಾಗಿರುವುದರಿಂದ ಈ ಸಮಾವೇಶಕ್ಕೆ ಕಾರ್ಯಕರ್ತರು ಬರಲು ಕಷ್ಟವಾಗುತ್ತದೆ. ಬೆಂಗಳೂರು ನಗರದ ಸುತ್ತಮುತ್ತಲಿನ ಕಾರ್ಯಕರ್ತರು ಮಾತ್ರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಓಬಿಸಿ ಏಕತಾ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.