150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಬಿಜೆಪಿ ಗುರಿ: ಬಿ.ಎಸ್.ಯಡಿಯೂರಪ್ಪ

ಸೋಮವಾರ, 14 ನವೆಂಬರ್ 2016 (18:41 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯಿದ್ದು, ಈ ನಿಟ್ಟಿನಲ್ಲಿ ಪಕ್ಷ ದೃಢ ಹೆಜ್ಜೆ ಇಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. 
 
ಬಿಜೆಪಿಯ ಹಿಂದುಳಿದ ವರ್ಗಗಳ ಏಕತಾ ಸಮಾವೇಶ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ನೀಡಿರುವ 150 ಸ್ಥಾನಗಳಲ್ಲಿ ಜಯಭೇರಿಯಾಗಲು ಈಗಿನಿಂದಲೇ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಹೇಳಿದರು. 
 
ರಾಜ್ಯದಲ್ಲಿ ಎಪಿಎಂಸಿ ಚುನಾವಣೆ ಆರಂಭವಾಗಿರುವುದರಿಂದ ಈ ಸಮಾವೇಶಕ್ಕೆ ಕಾರ್ಯಕರ್ತರು ಬರಲು ಕಷ್ಟವಾಗುತ್ತದೆ. ಬೆಂಗಳೂರು ನಗರದ ಸುತ್ತಮುತ್ತಲಿನ ಕಾರ್ಯಕರ್ತರು ಮಾತ್ರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಓಬಿಸಿ ಏಕತಾ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ