ಕೇರಳದ ಗಡಿಭಾಗ ತಲಪಾಡಿ ಬಳಿ ಟೋಲ್ ಸಂಗ್ರಹಿಸದಂತೆ ಬಿಜೆಪಿ ಕಾರ್ಯಕರ್ತರು, ಶಾಸಕರಿಂದ ಪ್ರತಿಭಟನೆ

ಬುಧವಾರ, 1 ಜನವರಿ 2020 (10:29 IST)
ಮಂಗಳೂರು : ಕೇರಳದ ಗಡಿಭಾಗ ತಲಪಾಡಿ ಬಳಿ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು, ಶಾಸಕರು ಪ್ರತಿಭಟನೆ ನಡೆಸಿದ್ದಾರೆ.



ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ಪೂರ್ಣಗೊಳಿಸದ ಹಿನ್ನಲೆಯಲ್ಲಿ ಟೋಲ್ ಸಂಗ್ರಹಿಸದಂತೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೂ ಕೂಡ ಕೇರಳದ ಗಡಿಭಾಗ ತಲಪಾಡಿ ಟೋಲ್ ಬಳಿ ನವಯುಗ ಕಂಪೆನಿಯಿಂದ ಟೋಲ್ ಸಂಗ್ರಹಿಸಲಾಗುತ್ತಿತ್ತು.


ಈ ಹಿನ್ನಲೆಯಲ್ಲಿ  ಬಿಜೆಪಿ ಕಾರ್ಯಕರ್ತರು ಹಾಗು ಶಾಸಕರು ಟ್ರೋಲ್ ಸಂಗ್ರಹವನ್ನು ವಿರೋಧಿಸಿ ಟೋಲ್ ಬಳಿ ಕುಳಿತು ತೀವ್ರ ಪ್ರತಿಭಟನೆ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ