ವ್ಯಾಪಾರ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಅಳವಡಿಸಿರುವ ಬೋರ್ಡ್ಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕೆಂದು ಸರ್ಕಾರ ಆದೇಶಿಸಿದ್ದರೂ ಸೊಪ್ಪು ಹಾಕದವರಿಗೆ ಕನ್ನಡ ರಕ್ಷಣಾ ವೇದಿಕೆ ಹಾಗೂ ಇತರೆ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಬಿಸಿ ಮುಟ್ಟಿಸಿದ್ದಾರೆ. ಮಂಗಳವಾರ ರಾಜ್ಯದ ಚಿತ್ರದುರ್ಗ, ಕಾರವಾರ, ಕೊಪ್ಪಳ, ದಾವಣಗೆರೆ ಮುಂತಾದೆಡೆ ಇಂಗ್ಲಿಷ್ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಕನ್ನಡ ವಿರೋಧಿ ಮನಸ್ಥಿತಿಗೆ ಸೆಡ್ಡುಹೊಡೆಯಲಾಗಿದೆ.