ಶಾಸಕ ಮುನಿರತ್ನ ಮನೆಯ ಬಳಿ ಭಾರೀ ಸ್ಫೋಟ; ವ್ಯಕ್ತಿಯೊರ್ವ ಸಾವು

ಭಾನುವಾರ, 19 ಮೇ 2019 (11:44 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಮುನಿರತ್ನ ಮನೆಯ ಬಳಿ ಭಾರೀ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ  ವ್ಯಕ್ತಿಯೊಬ್ಬ ಸಾವನಪ್ಪಿದ್ದಾನೆ.




ವೆಂಕಟೇಶ್ ಮೃತ ದುರ್ದೈವಿ. ಈತ ಮುನಿರತ್ನ ಮನೆಯ ಸಣ್ಣ ಪುಟ್ಟ ಕೆಲಸಗಳನ್ನ ನೋಡಿಕೊಳ್ಳುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವಯ್ಯಾಲಿಕಾವಲ್ 11ನೇ ಬಿ ಕ್ರಾಸ್ ಬಳಿ ಇರುವ ಮುನಿರತ್ನ ನಿವಾಸದ ಮುಂಭಾಗದ ಕಾರ್ ಪಾರ್ಕಿಂಗ್ ಬಳಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ವೆಂಕಟೇಶ್ ದೇಹ ಛಿದ್ರ ಛಿದ್ರಗೊಂಡಿದೆ.


ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು, ಸ್ಪೋಟಕ್ಕೆ ಕಾರಣವೆನೆಂಬುದು ತಿಳಿದುಬಂದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ