ಬಿಎಂಟಿಸಿ ಚಾಲಕ ಆತ್ಮಹತ್ಯೆ

ಮಂಗಳವಾರ, 8 ಆಗಸ್ಟ್ 2023 (18:51 IST)
ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಬಿಎಂಟಿಸಿ ಬಸ್ ಡಿಪೋದಲ್ಲಿ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ , ನಾಗೇಶ್ (45) ಆತ್ಮಹತ್ಯೆ ಮಾಡಿಕೊಂಡ ಬಿಎಂಟಿಸಿ ಚಾಲಕ ಕಂ ನಿರ್ವಾಹಕ, ಡಿಪೋದಲ್ಲಿ ಮ್ಯಾನೇಜರ್ ಕೊಠಡಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಆವತಿ ನಿವಾಸಿಯಾಗಿರುವ  ನಾಗೇಶ್ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಶಂಕೆ . ಸ್ಥಳಕ್ಕೆ ಪೊಲೀಸರ ಭೇಟಿ, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಿದ್ದು, ಘಟನೆ  ಸಂಭಂಧ  ದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ