ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣ; ತನಿಖಾ ವರದಿ ಕೇಂದ್ರಕ್ಕೆ ಸಲ್ಲಿಸಲಿರುವ ರಾಜ್ಯ ಸರ್ಕಾರ

ಶುಕ್ರವಾರ, 24 ಜನವರಿ 2020 (10:47 IST)
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ವಿಚಾರಣೆ ನಡೆಸಿದ ಪೊಲೀಸ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ  ಇಂದು ಕೇಂದ್ರಕ್ಕೆ ಸಲ್ಲಿಸಲಿದೆ.


ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ   ಆರೋಪಿ ಆದಿತ್ಯ ರಾವ್ ಅವರನ್ನು ಸುದೀರ್ಘ ವಿಚಾರಣೆ ನಡೆಸಿದ ಪೊಲೀಸರು ತನಿಖಾ ವರದಿ ಸಿದ್ದಪಡಿಸಿದ್ದಾರೆ. ಈ ವರದಿಯನ್ನು ರಾಜ್ಯ ಸರ್ಕಾರ  ಇಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಲಿದೆ.

ಹಾಗೇ ಆರೋಪಿ ಆದಿತ್ಯರಾವ್ ವಿಚಾರಣೆ ಮುಂದುವರಿಯಲಿದ್ದು, ಇಂದು ಪೊಲೀಸರು ಬಾಂಬ್ ಪತ್ತೆಯಾದ ಸ್ಥಳ ಹಾಗೂ ಆರೋಪಿ ಕೆಲಸ ಮಾಡುತ್ತಿದ್ದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ