ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ ಬೊಮ್ಮಾಯಿ

ಮಂಗಳವಾರ, 29 ನವೆಂಬರ್ 2022 (14:43 IST)
ಬೆಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದ ಹಿನ್ನೆಲೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತು ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡಲು ಸಿಎಂ ಭೇಟಿಗೆ ಪ್ರಯತ್ನಿಸಲಿದ್ದು, ಭೇಟಿಗೆ ಸಮಯ ಸಿಕ್ಕಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಬಗ್ಗೆ ಚರ್ಚೆ ನಡೆಸಲಿದ್ದು ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ