ಚಿತ್ರದುರ್ಗ ಜಿಲ್ಲೆ ಉಪವಿಭಾಗಾಧಿಕಾರಿ ವಿರುದ್ಧ ಲಂಚದ ಆರೋಪ ಕೇಳಿ ಬಂದಿದೆ. ಉದ್ಯಮಿ ರಾಜಶೇಖರ್ ಎಸಿ ತಿಪ್ಪೇಸ್ವಾಮಿ ವಿರುದ್ಧ ಲೋಕಾಯುಕ್ತರಿಗೆ ದೂರು ದಾಖಲಿಸಿದ್ದಾರೆ. ಲಂಚದ ಹಣದಲ್ಲಿ ಚಿತ್ರದುರ್ಗ ಜಿಲ್ಲೆ ಉಸ್ತುವಾರಿ ಸಚಿವರಾದ ಹೆಚ್. ಆಂಜನೇಯ ಮತ್ತು ಅವರ ಕಚೇರಿಯವರಿಗೂ ಪಾಲಿದೆ ಎಂದು ಎಸಿ ತಮಗೆ ಕೊಟ್ಟಿರುವ ಚೀಟಿಯಲ್ಲಿ ಬರೆದಿದ್ದಾರೆ ಎಂದು ರಾಜಶೇಖರ್ ಗಂಭೀರವಾಗಿ ಆರೋಪಿಸಿದ್ದಾರೆ.