ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಸಹೋದರರಾದ ಗುರುಬಸನವಗೌಡ( 48), ಜಯಶೀಲ (46) ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸಹೋದರರಿಬ್ಬರು ವಿಪರೀತ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲಾಗದೆ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇವರು ಬಳ್ಳಾರಿಯ ಕೊಟ್ವೂರಿನಲ್ಲಿರುವ ಎಣ್ಣೆ ಮಿಲ್ ಮಾಲೀಕರಾಗಿದ್ದಾರೆ. ಇಬ್ಬರು ಸದಸ್ಯರನ್ನು ಕಳೆದುಕೊಂಡಿರುವ ಕುಟುಂಬಸ್ಥರ ರೋಧನ ಮುಗಿಲುಮುಟ್ಟಿದೆ.