ವಿಧವೆ ಅಕ್ಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದ ಸಹೋದರರು

ಗುರುವಾರ, 17 ಅಕ್ಟೋಬರ್ 2019 (11:21 IST)
ದಾವಣಗೆರೆ : ವಿಧವೆ ಅಕ್ಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಸಹೋದರರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹರಿಹರದಲ್ಲಿ ನಡೆದಿದೆ.




ಹರೀಶ್ (29) ಕೊಲೆಯಾದ ವ್ಯಕ್ತಿ, ನಾಗರಾಜ, ಮಾರುತಿ, ರಾಘವೇಂದ್ರ ಹಾಗೂ ರಮೇಶ್ ಕೊಲೆಮಾಡಿದ ಆರೋಪಿಗಳು. ಡಾಬಾದಲ್ಲಿ ಅಡುಗೆ ಭಟ್ಟನಾಗಿದ್ದ ಹರೀಶ್ ಗೆ ಅಲ್ಲಿ ಕೆಲಸಮಾಡುತ್ತಿದ್ದ ವಿಧವಾ ಮಹಿಳೆಯೊಬ್ಬಳು ಪರಿಚಯವಾಗಿದ್ದಾಳೆ. ಬಳಿಕ ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಈ ವಿಚಾರ ತಿಳಿದ ಮಹಿಳೆಯ ಸಹೋದರರು ಹರೀಶ್ ಗೆ ತನ್ನ ಅಕ್ಕನಿಂದ ದೂವಿರುವಂತೆ ಎಚ್ಚರಿಕೆ ಕೊಟ್ಟಿದ್ದರು.


ಆದರೆ ಹರೀಶ್ ತನ್ನ  ಅಕ್ರಮ ಸಂಬಂಧವನ್ನು ಮುಂದುವರಿಸಿದ್ದ. ಇದರಿಂದ ಕೋಪಗೊಂಡ ಆಕೆಯ ಸಹೋದರರು ಹರೀಶ್ ಮೇಲೆ ಹಲ್ಲೆ ಮಾಡಿ ನಿರ್ಜನ ಪ್ರದೇಶ‍ಕ್ಕೆ ಎಳೆದೊಯ್ದು ಕೊಲೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹರಿಹರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ