ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಹೇಗೆ ಇತ್ಯರ್ಥ್ಯಗೊಳಿಸುತ್ತಿರಾ ಎಂದು ಅನಿವಾಸಿ ಕನ್ನಡಿಗರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅಂತರ ರಾಜ್ಯ ಜಲ ವಿವಾದಗಳನ್ನು ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಗೊಳಿಸಿಕೊಳ್ಳಬೇಕಿದೆ. ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ. ಆದರೆ, ಸಭೆಗೆ ಗೋವಾ ಹಾಗೂ ಮಹರಾಷ್ಟ್ರದ ವಿಪಕ್ಷ ನಾಯಕರು ಪಾಲ್ಗೊಳ್ಳುತ್ತಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.