ಬಿ.ಎಸ್.ಯಡಿಯೂರಪ್ಪಗೆ ಭಾರೀ ಮುಖಭಂಗ

ಸೋಮವಾರ, 3 ಜೂನ್ 2019 (18:35 IST)
ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿಗೆ ಅದರಲ್ಲೂ ಬಿ.ಎಸ್.ಯಡಿಯೂರಪ್ಪಗೆ ಈಗ ಭಾರೀ ಮುಖಭಂಗವಾಗಿದೆ.

ಬಿಜೆಪಿ ಪಕ್ಷ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಗ್ಗರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಮೈತ್ರಿ ಅಧಿಕಾರದ ಗದ್ದುಗೆ ಹಿಡಿದಿದೆ. ಶಿಕಾರಿಪುರ ಪುರಸಭೆಯ 23 ಸ್ಥಾನಗಲ್ಲಿ ಕಾಂಗ್ರೇಸ್ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಮೂರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಶಿರಾಳಕೊಪ್ಪ ಕೂಡ ಕಾಂಗ್ರೇಸ್ ಮೈತ್ರಿ ಪಾಲಾಗಿದೆ. ಒಟ್ಟು 12 ಸ್ಥಾನಗಳಲ್ಲಿ
ಕಾಂಗ್ರೇಸ್ 07, ಬಿಜೆಪಿ 02, ಜೆಡಿಎಸ್ 03 ಪಾಲಾಗಿದೆ.

ಸೊರಬದಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಬಿಜೆಪಿ ಭೇದಿಸಿದೆ. ಒಟ್ಟು 11 ಸ್ಥಾನಗಳಲ್ಲಿ ಬಿಜೆಪಿ 06, ಕಾಂಗ್ರೆಸ್ 04, ಜೆಡಿಎಸ್ 01, ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಸಾಗರ ನಗರಸಭೆ ಈ ಬಾರಿ ಬಿಜೆಪಿ ಪಾಲಾಗಿದೆ. ಒಟ್ಟು 31 ಸ್ಥಾನಗಳಲ್ಲಿ bjp16, Cong 09, JDS 01,
Independent 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಹೊಸನಗರ ಪಟ್ಟಣ ಪಂಚಾಯಿತಿ ಚುನಾವಣೆ ಯಲ್ಲಿ ಈ ಬಾರಿ ಕಾಂಗ್ರೆಸ್ ಮೈತ್ರಿ ಮೇಲುಗೈ ಸಾಧಿಸಿದೆ. ಒಟ್ಟು 11 ಸ್ಥಾನಗಳಲ್ಲಿ Cong 04, Bjp 04, JDS 03 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ