ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ಘೋಷಣೆ ಮಾಡಿದ ಬಿ.ಎಸ್.ಯಡಿಯೂರಪ್ಪ

ಭಾನುವಾರ, 9 ಫೆಬ್ರವರಿ 2020 (17:56 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಇದೀಗ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡೋಕೆ ಸಿಎಂ ಮುಂದಾಗಿದ್ದಾರೆ.

ಮಾರ್ಚ್ 5 ರಂದು ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕವಷ್ಟೇ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಸಿ.ಎಂ. ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಲಿದ್ದಾರೆ.

ಬಜೆಟ್ ಮಂಡನೆಗಾಗಿ ಸಿದ್ಧತೆ ನಡೆಯುತ್ತಿದ್ದು, ಅಭಿವೃದ್ಧಿ ಪರ ಬಜೆಟ್ ಮಂಡನೆ ಮಾಡ್ತೇವೆ ಅಂತ ಯಡಿಯೂರಪ್ಪ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ