ಅಟಲ್ ಬಿಹಾರಿ ವಾಜಪೇಯಿ ನಿಧನ ಎಂದು ಟ್ವೀಟ್ ಮಾಡಿದ ಬಿ ಎಸ್ ಯಡಿಯೂರಪ್ಪ

ಗುರುವಾರ, 16 ಆಗಸ್ಟ್ 2018 (17:00 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಇದೀಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿ ನಂತರ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.


ಈಗಾಗಲೇ ತ್ರಿಪುರ ರಾಜ್ಯಪಾಲ ತಥಾಗತ ರಾಯ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿದ್ದಾರೆಂದು ಟ್ವೀಟ್ ಮಾಡಿ ಜನರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಏಮ್ಸ್ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಬರುವ ಮೊದಲೇ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ ಅವರು  ಈ ರೀತಿ ಟ್ವೀಟ್ ಮಾಡಿ ಜನರ ಕೋಪಕ್ಕೆ ಗುರಿಯಾಗಿದ್ದಾರೆ.


ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಇಂಥ ಬೇಜವಾಬ್ದಾರಿ ವರ್ತನೆ ತೋರುವುದು ಸರಿಯೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ