ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಮಠಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪ

ಗುರುವಾರ, 17 ಜನವರಿ 2019 (10:29 IST)
ಬೆಂಗಳೂರು : ಹಳೆ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಬಿ.ಎಸ್.ಯಡಿಯೂರಪ್ಪ ಅವರು ಮಠಕ್ಕೆ ತೆರಳಿದ್ದಾರೆ.


ಬಿ.ಎಸ್.ಯಡಿಯೂರಪ್ಪ ಜೊತೆಗೆ ಅವರ ಪುತ್ರ ಬಿ.ವೈ.ವಿಜಯೇಂದ್ರ ಕೂಡ ಪ್ರಯಾಣ ಬೆಳೆಸಿದ್ದಾರೆ. ಸಂಜೆಯವರೆಗೂ ಸಿದ್ಧಗಂಗಾ ಮಠದಲ್ಲೇ ಇರುವುದಾಗಿ ಅವರು ಹೇಳಿದ್ದಾರೆ.


ಹಾಗೇ ಸಿದ್ಧ ಗಂಗಾ ಮಠಕ್ಕೆ ಸಚಿವ ವಿ. ಸೋಮಣ್ಣ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಕೂಡ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ