ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ಮತ್ತೊಂದು ಅಸ್ತ್ರ

ಶುಕ್ರವಾರ, 3 ಮಾರ್ಚ್ 2017 (10:38 IST)
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೈಕಮಾಂಡ್ ಗೆ ಕಪ್ಪ ನೀಡಿದ ಹಗರಣ ಮಾಸುತ್ತಿದ್ದಂತೆ ಮತ್ತೊಂದು ವಿಚಾರದಲ್ಲಿ ಸರ್ಕಾರದ ಕಾಲೆಳೆಯಲು ನಿರ್ಧರಿಸಿದ್ದಾರೆ.


ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಆದರೂ ರಾಜ್ಯ ಸರ್ಕಾರ ಅವರ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದ್ದಾರೆ. ಜನರ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆ ಎಂದು ಜರೆದಿದ್ದಾರೆ.

ಈ ಹಿನ್ನಲೆಯಲ್ಲಿ ಮಾರ್ಚ್ 9 ರಂದು ಬಿಜೆಪಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ಬರ ಪರಿಸ್ಥಿತಿ ಅವಲೋಕಿಸಲಿದೆ ಎಂದು ಯಡಿಯೂರಪ್ಪ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ