ದೇವೇಗೌಡರ ಭೇಟಿಯಾದ ಬಿಎಸ್ ವೈ ಆಪ್ತ!
ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ನಿನ್ನೆಯೇ ದೆಹಲಿಗೆ ತೆರಳಿದ್ದ ಎಚ್ ಡಿ ದೇವೇಗೌಡರು ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದಾರೆ.
ಕರ್ನಾಟಕ ಭವನದಲ್ಲಿರುವ ದೇವೇಗೌಡರನ್ನು, ಬಿಎಸ್ ವೈ ಆಪ್ತರಾಗಿರುವ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಭೇಟಿಯಾಗಿದ್ದಾರೆ. ಆದರೆ ಈ ಭೇಟಿಯ ಉದ್ದೇಶವೇನೆಂದು ತಿಳಿದುಬಂದಿಲ್ಲ. ಆದರೆ ಕಾಂಗ್ರೆಸ್-ಜೆಡಿಎಸ್ ನಡುವೆ ಉಂಟಾಗಿರುವ ಸಣ್ಣ ವೈಮನಸ್ಯದ ನಡುವೆ ಬಿಜೆಪಿ ಪ್ರಭಾವಿ ನಾಯಕ ದೇವೇಗೌಡರನ್ನು ಭೇಟಿಯಾಗಿರುವ ಬಗ್ಗೆ ಹಲವು ಊಹಾಪೋಹಗಳು ಎದ್ದಿವೆ.