ಬಿಎಸ್‌ವೈ ಸಿಎಂ ಆಗಿದ್ದಾಗ ಚಾಮರಾಜನಗರಕ್ಕೆ ಬಂದಿದ್ದಾರಾ?: ಸಿಎಂ ಸಿದ್ದರಾಮಯ್ಯ

ಬುಧವಾರ, 5 ಏಪ್ರಿಲ್ 2017 (18:54 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಯಿಂದ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. ಇದೀಗ ಮತ ಕೇಳಲು ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
 
ಗುಂಡ್ಲುಪೇಟೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡ ಅವರು ಅಕ್ಕಿಯನ್ನು ಕೊಡದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕೆ ಮತದಾರರು ಯಾಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.
 
ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಯಿಂದ ಚಾಮರಾಜನಗರಕ್ಕೆ ಯಾವ ಮುಖ್ಯಮಂತ್ರಿಯೂ ಭೇಟಿ ನೀಡಿರಲಿಲ್ಲ. ನಾನು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ. ಇದನ್ನು ಮತದಾರರು ಮರೆಯಲಾರರು ಎಂದರು.
 
ಉಪಚುನಾವಣೆಯಲ್ಲಿ ಜಾತಿ ಧರ್ಮದ ಆಧಾರದ ಮೇಲೆ ಗೆಲ್ಲುತ್ತೇವೆ ಎನ್ನುವ ಬಿಜೆಪಿಯವರ ನಂಬಿಕೆ ಹುಸಿಯಾಗಲಿದೆ. ಎರಡೂ ಕ್ಷೇತ್ರಗಳ ಮತದಾರರು ಜಾಣರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ