ಏರ್ ಸ್ಟ್ರೈಕ್ ನ್ನು ರಾಜಕೀಯಕ್ಕೆ ಬಳಸಿಕೊಂಡ ಬಿಎಸ್ ವೈ ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ- ಉಗ್ರಪ್ಪ

ಶನಿವಾರ, 2 ಮಾರ್ಚ್ 2019 (06:55 IST)
ಬಳ್ಳಾರಿ : ಬಿ.ಎಸ್.ಯಡಿಯೂರಪ್ಪ ಅವರು ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ ಎಂದು ಸಂಸದ ಉಗ್ರಪ್ಪ ಕಿಡಿಕಾಡಿದ್ದಾರೆ.


ಹಂಪಿಯಲ್ಲಿ ಮಾತನಾಡಿದ ಸಂಸದರು, ಭಾರತ ಪಾಕಿಸ್ತಾನದ ಮಧ್ಯೆ ಇರುವ ಕಲಹ ನಿನ್ನೆ ಮೊನ್ನೆಯದಲ್ಲ. ಈ ಹಿಂದೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಆದರೆ ಆ ಸಂದರ್ಭವನ್ನು ಯಾವುದೇ ರಾಜಕೀಯ ಪಕ್ಷ ತನ್ನ ಪ್ರಚಾರಕ್ಕೆ ಬಳಸಿಕೊಳ್ಳಿಲ್ಲ. ಆದರೆ ಏರ್ ಸ್ಟ್ರೈಕ್ ಅನ್ನು ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯೋಧರು ಜೀವದ ಹಂಗು ತೊರೆದು ನಮ್ಮನ್ನ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ರಾಜಕೀಯಕ್ಕೆ ಬಳಸಿಕೊಳ್ಳವುದು ಯಾವುದೇ ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ. ಈ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆ ಅವರಲ್ಲಿರುವ ಸಣ್ಣತನವನ್ನ ತೋರುತ್ತದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ