ಸರ್ಕಾರದ ಸಾಧನೆ ಶೂನ್ಯ- ರಾಜ್ಯ ಸರ್ಕಾರದ ವಿರುದ್ಧ ಬಿಎಸ್ ಯಡಿಯೂರಪ್ಪ ವಾಗ್ದಾಳಿ

ಶನಿವಾರ, 24 ನವೆಂಬರ್ 2018 (12:28 IST)
ಬೆಂಗಳೂರು : ರಾಜ್ಯ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದ ಬಿಎಸ್ ಯಡಿಯೂರಪ್ಪ ಅವರು ಸರ್ಕಾರದ ಸಾಧನೆ ಶೂನ್ಯ ಎಂದು ಹೇಳಿದ್ದಾರೆ.


ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು,’ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಸಾಧನೆ ಕಳಪೆಯಾಗಿದೆ. ಸರ್ಕಾರದ ಯಾವ ಸಚಿವರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಬಜೆಟ್ ಹಣದಲ್ಲಿ ಶೇ. 36ರಷ್ಟು ಹಣ ಮಾತ್ರ ಖರ್ಚು ಮಾಡಿದ್ದಾರೆ. ಇದರಲ್ಲಿ ಬಹುತೇಕ ಸರ್ಕಾರಿ ನೌಕರರ ಸಂಬಳಕ್ಕೆ ವಿನಿಯೋಗವಾಗಿದೆ. ಸಿಎಂ ಕುಮಾರಸ್ವಾಮಿ ಹಣಕಾಸು ಇಲಾಖೆ ಸ್ಥಿತಿಗತಿ ಬಗ್ಗೆ ವಿವರಣೆ ಕೊಡಲಿ ‘ ಎಂದು ಹೇಳಿದ್ದಾರೆ.


ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ‘ಸಾಲ ಮನ್ನಾ ಘೋಷಣೆಯಾದರೂ ರೈತರಿಗೆ ನೆಮ್ಮದಿ ಸಿಕ್ಕಿಲ್ಲ. ರೈತರ ಖಾತೆಗೆ ಹಣ ಜಮೆಯಾಗಿಲ್ಲ. ಇದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ