ಬಜೆಟ್ ಭರ್ಜರಿಯಾಗಿದೆ ಎಂದ ಸಿಎಂ ಬೊಮ್ಮಾಯಿ

ಶನಿವಾರ, 5 ಮಾರ್ಚ್ 2022 (14:35 IST)
ಮೇಕೆದಾಟು ಪಾದಯಾತ್ರೆ ಮಾಡಿದ್ದಕ್ಕೆ ಸರ್ಕಾರ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ನಾವು ಪಾದಯಾತ್ರೆ ಕೈಗೊಂಡಿದ್ದರಿಂದಲೇ ಬಜೆಟ್ ನಲ್ಲಿ ಯೋಜನೆಗೆ 1000 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು.
ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಆರೋಪಕ್ಕೆ ಇಲ್ಲಲ್ಲ ವಿಧಾನಸೌಧದಲ್ಲೇ ಉತ್ತರ ಕೊಡುತ್ತೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ