ಬೆಂಗಳೂರಿನ ಸಾರಕ್ಕಿ ಕೆರೆ ಒತ್ತುವರಿ ತೆರವಿನ ಕಾರ್ಯಾಚರಣೆ ಸಂದರ್ಭದಲ್ಲಿ ಕಟ್ಟಡವು ಸಂಪೂರ್ಣ ಕುಸಿದು ಹಿಟಾಚಿ ವಾಹನದ ಮೇಲೆ ಬಿದ್ದ ಘಟನೆ ನಡೆದಿದೆ. ಪೊಲೀಸರು ಸೇರಿ 800 ಮಂದಿ ಸಿಬ್ಬಂದಿ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಬೆಳಿಗ್ಗೆ 7.30ರಿಂದಲೇ ತೆರವು ಕಾರ್ಯಾಚರಣೆ ಆರಂಭವಾಗಿದೆ.