ಮನೆ ಮುಂದೆ ನಿಂತಿದ್ದ ಬೈಕ್ ಸುಟ್ಟು ಕರಕಲು!

ಬುಧವಾರ, 23 ಜನವರಿ 2019 (16:51 IST)
ಮನೆ ಮುಂದೆ ನಿಂತಿದ್ದ ಬೈಕ್ ಗೆ ಬೆಂಕಿ ಹಚ್ಚಿದ ಪರಿಣಾಮ ಸುಟ್ಟು ಕರಕಲಾದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವನಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಬೈಕ್ ಸುಟ್ಟು ಭಸ್ಮವಾಗಿದೆ.

ಶಿಗ್ಗಾಂವನ ನವನಗರದ ನಿವಾಸಿ ಚಂದ್ರಶೇಖರ ಡೊಳ್ಳೆಶ್ವರ್ ಅವರಿಗೆ ಸೇರಿದ ಬೈಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಡರಾತ್ರಿ  ಕಿಡಿಗೇಡಿಗಳಿಂದ ನಡೆದ ಕೃತ್ಯ ಇದಾಗಿದೆ. ಘಟನೆ ಕುರಿತು ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ