ಬಸ್-ಕಾರ್ ಅಪಘಾತ: ಯುವತಿ ದುರ್ಮರಣ

ಮಂಗಳವಾರ, 10 ಮೇ 2016 (17:47 IST)
ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಮಡಿಕೇರಿಯಲ್ಲಿ ನಡೆದಿದೆ.
 
ಮೈಸೂರು- ಮಡಿಕೇರಿ ರಾಜ್ಯ ಹೆದ್ದಾರಿಯ ಕೆದಕಲ್ ತಿರುವಿನಲ್ಲಿ ನಿನ್ನೆ ಈ ಘಟನೆ ನಡೆದಿದ್ದು ಮೃತಳನ್ನು 25 ವರ್ಷದ ಚೈತ್ರಾ ಎಂದು ಗುರುತಿಸಲಾಗಿದೆ. ಆಕೆ ಮೈಸೂರಿನ ರಾಜೇಂದ್ರನಗರದ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸದನ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
 
ಕಾರು ಚಾಲಕನ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ವೆಬ್ದುನಿಯಾವನ್ನು ಓದಿ