ಮೈಸೂರು- ಮಡಿಕೇರಿ ರಾಜ್ಯ ಹೆದ್ದಾರಿಯ ಕೆದಕಲ್ ತಿರುವಿನಲ್ಲಿ ನಿನ್ನೆ ಈ ಘಟನೆ ನಡೆದಿದ್ದು ಮೃತಳನ್ನು 25 ವರ್ಷದ ಚೈತ್ರಾ ಎಂದು ಗುರುತಿಸಲಾಗಿದೆ. ಆಕೆ ಮೈಸೂರಿನ ರಾಜೇಂದ್ರನಗರದ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸದನ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.