ಕೇಂದ್ರ ಸರಕಾರದ ನೂತನ ಭವಿಷ್ಯ ನೀತಿ ವಿರೋಧಿಸಿ ಗಾರ್ಮೆಂಟ್ ಫ್ಯಾಕ್ಟರಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದಲ್ಲದೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ.
ಗಾರ್ಮೆಂಟ್ ಕಾರ್ಮಿಕರ ಪ್ರತಿಭಟನೆ ಎರಡನೆ ದಿನವೂ ಮುಂದುವರಿದಿದ್ದು, ಕೂಡಲೇ ಹೊಸ ನೀತಿಯನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಹಲವಾರು ಬಸ್ಗಳು ಜಖಂಗೊಂಡಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.