ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ಕುರಿತಂತೆ ಬಿಎಸ್ ವೈ ಹೇಳಿದ್ದೇನು?

ಶುಕ್ರವಾರ, 17 ಸೆಪ್ಟಂಬರ್ 2021 (14:29 IST)
ಮೈಸೂರು :  ಬಿ.ವೈ. ವಿಜಯೇಂದ್ರ ಅವರು ಸದ್ಯಕ್ಕೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಅವರು ಸದ್ಯಕ್ಕೆ ಬೈಎಲೆಕ್ಷನ್ ನಲ್ಲಿ ಸ್ಪರ್ಧೆ ಮಾಡುವುದಿಲ್ಲ. ಮುಂದೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ನಿರ್ಧರಿಸಿಲ್ಲ. ಸದ್ಯ ರಾಜ್ಯ ಪ್ರವಾಸದಲ್ಲಿ ಬಿ.ವೈ. ವಿಜಯೇಂದ್ರ ಬ್ಯುಸಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಅಧಿವೇಶನ ಮುಗಿದ ಬಳಿಕ ನಾನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯ ಪ್ರವಾಸ ಮಾಡುತ್ತೇವೆ. ಅಧಿವೇಶನ ಮುಗಿದ ಬಳಿಕ 15 ದಿನಗಳ ನಂತರ ರಾಜ್ಯ ಪ್ರವಾಸದ ರೂಪರೇಷ ಸಿದ್ದಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ