ಉಪಚುನಾವಣೆ ಪ್ರಚಾರ: ಸ್ಟಾರ್ ನಟರ ಪಟ್ಟಿಯಲ್ಲಿ ಅಂಬರೀಶ್ ಹೆಸರೇ ಇಲ್ಲ!

ಮಂಗಳವಾರ, 21 ಮಾರ್ಚ್ 2017 (09:22 IST)
ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ಇದೀಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಆದರೆ ಕಾಂಗ್ರೆಸ್ ಪರ ಪ್ರಚಾರ ನಡೆಸುವ ನಟರ ಪಟ್ಟಿಯಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಹೆಸರೇ ಇಲ್ಲ!

 

ಮೈಸೂರಿನ ಪ್ರಮುಖ ಕಾಂಗ್ರೆಸ್ ನಾಯಕರಾಗಿರುವ ಅಂಬರೀಶ್ ರನ್ನು ಪ್ರಚಾರದಿಂದ ದೂರವಿಡಲಾಗಿದೆ. ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಬೇಸರಗೊಂಡಿದ್ದ ಅಂಬಿ, ಸಿಎಂ ಸಿದ್ಧರಾಮಯ್ಯ ವಿರುದ್ಧ ಸಿಡಿದೆದ್ದಿದ್ದರು.

 
ನಂತರ ಪಕ್ಷದ ಚಟುವಟಿಕೆಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿರಲಿಲ್ಲ. ಈ ಎಲ್ಲಾ ಹಿನ್ನಲೆಯಲ್ಲಿ ಅವರನ್ನು ಪ್ರಚಾರದಿಂದ ದೂರವಿಡಲಾಗಿದೆ. ಆದರೆ ಕನ್ನಡ ಚಿತ್ರರಂಗದ ಪೈಕಿ ಸಚಿವೆ ಉಮಾಶ್ರೀ, ರಮ್ಯಾ,  ಶಶಿಕುಮಾರ್, ಜಯಮಾಲಾ,  ಭಾವನಾ, ಮುಖ್ಯಮಂತ್ರಿ ಚಂದ್ರು, ಮದನ್ ಮಲ್ಲು ಸೇರಿದಂತೆ ಅನೇಕರನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ