15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ; ಅನರ್ಹ ಶಾಸಕರ ಪತ್ನಿ ಚುನಾವಣಾ ಕಣಕ್ಕಿಳಿಯಲಿದ್ದಾರಾ?

ಸೋಮವಾರ, 11 ನವೆಂಬರ್ 2019 (10:46 IST)
ಮಂಡ್ಯ : 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕರ ಪತ್ನಿ ಚುನಾವಣಾ ಕಣ್ಣಕ್ಕೀಳಿಯಲಿದ್ದಾರಾ ಎಂಬ ಅನುಮಾನ ಇದೀಗ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.




ಹೌದು. ಅನರ್ಹ ಶಾಸಕರ ವಿಚಾರಕ್ಕೆ ಸಂಬಂಧಪಟ್ಟ ತೀರ್ಪುನ್ನು ಇನ್ನು ಸುಪ್ರೀಂ ಕೋರ್ಟ್ ಪ್ರಕಟ ಮಾಡದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ನಾರಾಯಣಗೌಡರ ಪತ್ನಿ ದೇವಿಕಾ ಉಪಚುನಾವಣೆಗೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿಬಂದಿದೆ.


ಈ ಹಿಂದೆ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದ ದೇವಿಕಾ ಈಗ ಕೆಆರ್ ಪೇಟೆ ಕ್ಷೇತ್ರದ ಸಮಾರಂಭಗಳಲ್ಲಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ನಡೆದ ಆರೋಗ್ಯ ಮೇಳದ ಸಿಎಂ ಕಾರ್ಯಕ್ರಮದಲ್ಲೂ ಭಾಗಿಯಾಗಿ ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ