ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಮಂಗಳವಾರ, 14 ಮಾರ್ಚ್ 2017 (10:43 IST)
ಬೆಂಗಳೂರು: ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.

 
ಇಂದಿನಿಂದ ಮಾರ್ಚ್ 21 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಈ ಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದು, ನಾಮಪತ್ರ ಸಲ್ಲಿಕೆಗೂ ಮೊದಲೇ ರಾಜ್ಯ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಗುಂಡ್ಲುಪೇಟೆಯಲ್ಲಿ ದಿವಂಗತ ಸಚಿವ ಮಹದೇವ್ ಪ್ರಸಾದ್ ಪತ್ನಿ ಗೀತಾ ಮಹದೇವ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಇದು ಕಾಂಗ್ರೆಸ್ ಗೆ ಮಹತ್ವದ ಕ್ಷೇತ್ರವಾಗಿದೆ. ಅತ್ತ ನಂಜನಗೂಡಿನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ವಿ. ಶ್ರೀನಿವಾಸ್ ಪ್ರಸಾದ್ ಗೆ ಪ್ರತಿಷ್ಠೆಯ ಕಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ