ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಘಟಕ ಕೋರಿತ್ತು. ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿದೆ ಎಂದು ವಿವರಿಸಿದರು.
ಬಿಜೆಪಿ ಸರಕಾರ ಬಂದ ನಂತರ ಅವರಿಬ್ಬರಿಗೂ ಉತ್ತಮ ಅವಕಾಶ ಲಭಿಸಿತ್ತು. ಆದರೆ, ಸರಕಾರ ಇಲ್ಲದಾದಾಗ, ವಿಪಕ್ಷದಲ್ಲಿದ್ದಾಗ ಅವರಿಗೆ ಸ್ವಲ್ಪ ಸಮಸ್ಯೆ ಆಗಿದೆ ಎಂದು ಕಾಣುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.