ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನಲೆ; ಬಿಜೆಪಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ

ಮಂಗಳವಾರ, 19 ನವೆಂಬರ್ 2019 (10:52 IST)
ಹುಣಸೂರು : ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಮತದಾರರಿಗೆ ಹಣ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ.




ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಈ ನಾಮಪತ್ರ ಪ್ರಕ್ರಿಯೆಯ  ಬಳಿಕ ಬೃಹತ್ ಸಮಾವೇಶ ನಡೆಸಲಾಗಿತ್ತು.


ಇದಕ್ಕೆ ಜನರನ್ನು ಕರೆತರಲು ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೊಪ ಕೇಳಿಬಂದಿದ್ದು, ಜನರಿಗೆ ಹಣ ಹಂಚುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿವೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ