ಉಪ ಚುನಾವಣೆ, ಬಸವರಾಜ ಬೊಮ್ಮಾಯಿ ಪುತ್ರನಿಗೆ ಒಲಿದ ಶಿಗ್ಗಾಂವಿ ಟಿಕೆಟ್‌, ಏನಿದು ಹೈಕಮಾಂಡ್‌ ತಂತ್ರ

Sampriya

ಭಾನುವಾರ, 20 ಅಕ್ಟೋಬರ್ 2024 (12:43 IST)
Photo Courtesy X
ಬೆಂಗಳೂರು: ಕರ್ನಾಟಕದ ಮೂರು ಉಪಚುನಾವಣೆ ಪೈಕಿ ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.  ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಬಳ್ಳಾರಿಯ ಸಂಡೂರಿಗೆ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದೆ.

ಬಿಜೆಪಿಯ ಈ ನಡೆ ರಾಜ್ಯ ರಾಜಕಾರಣದಲ್ಲಿ ಅಚ್ಚರಿಗೆ ಕಾರಣವಾಗಿದೆ. ಉಪಚುನಾವಣೆಗೆ ಆಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಘಟಕದ ಪ್ರಮುಖರು ಚರ್ಚೆ ನಡೆಸಿ, ಶಿಫಾರಸು ಮಾಡುವ ಮುನ್ನವೇ, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿರುವ ಹೈಕಮಾಂಡ್‌ ನಡೆ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಅಚ್ಚರಿಯಾಗಿದೆ.

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪ್ರತಿನಿಧಿಸಿದ್ದ ಶಿಗ್ಗಾವಿಯಲ್ಲಿ , ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಿದ್ದು, ಇದೀಗ ತಾವೇ ಟೀಕೆ ಮಾಡುವ ಕುಟುಂಬ ರಾಜಕಾರಣದ ಪದ್ಧತಿಗೆ ಮಣೆ ಹಾಕಿದ್ದಾಂತಾಗಿದೆ. ಇದೀಗ ಹೈವೋಲ್ಟೆಜ್ ಕ್ಷೇತ್ರವಾದ ಚನ್ನಪ್ಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಹೆಸರು ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ