ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ; ವಿಧಾನಸೌಧದ 2ಕೀ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಸೋಮವಾರ, 22 ಜುಲೈ 2019 (10:21 IST)
ಬೆಂಗಳೂರು : ಇಂದು ವಿಶ್ವಾಸಮತಯಾಚಿಸುತ್ತಿರುವ ಹಿನ್ನಲೆಯಲ್ಲಿ  ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.




ವಿಧಾನಸೌಧದ 2ಕೀ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ  ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ರಾಜಭವನದ ಬಳಿಯೂ ಭದ್ರತೆಗಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.


ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, ಐವರು ಡಿಸಿಪಿಗಳು , 20 ಎಸಿಪಿಗಳು, 20 ಕೆಎಸ್ ಆರ್ ಪಿ, 20 ಸಿಎಆರ್  ತುಕಡಿ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ