ಸಂಪುಟ ವಿಸ್ತರಣೆ: ಎಐಸಿಸಿ ಅಧ್ಯಕ್ಷರ ಜತೆ ಸಿಎಂ ಚರ್ಚೆ

ಗುರುವಾರ, 4 ಅಕ್ಟೋಬರ್ 2018 (18:50 IST)
ಕಾಂಗ್ರೆಸ್ – ಜೆಡಿಎಸ್ ರಾಜ್ಯ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಿರುವುದು ಕುತೂಹಲ ಮೂಡಿಸಿದೆ.

ಅ.5ರಂದು ಎಐಸಿಸಿ ರಾಹುಲ್ ಗಾಂಧಿ ಯವರ ಜತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.

ಅ. 10 ಅಥವಾ 12ರಂದು ಸಂಪುಟ ವಿಸ್ತರಣೆ ಆಗುವುದು ಬಹುತೇಕ ಪಕ್ಕಾ ಆದಂತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ