ಸಚಿವ ಸಂಪುಟ ವಿಸ್ತರಣೆ ಪದೇ ಪದೇ ಮುಂದಕ್ಕೆ : ಆಕಾಂಕ್ಷಿಗಳ ಆಸೆಗೆ ಮತ್ತೆ ತಣ್ಣೀರು

ಶನಿವಾರ, 11 ಜನವರಿ 2020 (16:41 IST)
ರಾಜ್ಯದ ವಿಧಾನಸಭೆಗೆ ಉಪ ಚುನಾವಣೆ ನಡೆದು ಫಲಿತಾಂಶ ಬಂದು ತಿಂಗಳೇ ಕಳೆಯುತ್ತಿದ್ದರೂ ಸಚಿವ ಸಂಪುಟ ವಿಸ್ತರಣೆ ಮಾತ್ರ ಮುಂದಕ್ಕೆ ಹೋಗುತ್ತಲೇ ಇದೆ.

ಆರಂಭದಲ್ಲಿ ಡಿಸೆಂಬರ್ ಕೊನೆ, ಜನೇವರಿ ಮೊದಲ ವಾರ, ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಅನ್ನೋ ಸುದ್ದಿಗಳೇ ಬರ್ತಿದ್ದವು. ಆದರೆ ಇನ್ನೂ ದಿನ ನಿಗದಿಯಾಗಿಲ್ಲ.

ಇದೀಗ ಕೊನೆ ಕ್ಷಣದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ದೆಹಲಿ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಹೀಗಾಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಸಿಎಂ ಚರ್ಚೆ ಮಾಡ್ತಾರೆ ಅನ್ನೋ ವಿಷಯ ಸುಳ್ಳಾಗಿದೆ.

ಜನೇವರಿ 18 ರಂದು ಕೇಂದ್ರ ಗೃಹ ಸಚಿವ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಅಂದೇ ಸಿಎಂ ಅವರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ