ಸನಾತನ ಧರ್ಮವನ್ನು ಪರಾವಲಂಬಿ ಜೀವಿ ಅಳಿಸಲು ಸಾಧ್ಯವೇ- ಯೋಗಿ ಆದಿತ್ಯನಾಥ್

ಶನಿವಾರ, 9 ಸೆಪ್ಟಂಬರ್ 2023 (18:00 IST)
ರಾವಣನ ಅಹಂಕಾರ, ಕಂಸನ ಘರ್ಜನೆಯಿಂದ ಅಲುಗಾಡದ ಸನಾತನ ಧರ್ಮವನ್ನು ಈಗ ಅಳಿಸಲು ಸಾಧ್ಯವೇ? ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಶ್ನೆ ಮಾಡಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಸಿದ್ದರು, ಇವುಗಳ ವಿರುದ್ಧ ಹೋರಾಡುವ ಬದಲು ಸನಾತನ ಧರ್ಮವನ್ನು ಬುಡದಿಂದಲೇ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ರಾವಣನ ಅಹಂಕಾರದಿಂದ, ಕಂಸನ ಘರ್ಜನೆಯಿಂದ ಅಲುಗಾಡದ, ಔರಂಗಜೇಬನ ದುಷ್ಕೃತ್ಯಗಳಿಂದ ನಾಶಮಾಡಲು ಸಾಧ್ಯವಾಗದ ಸನಾತನ ಧರ್ಮವನ್ನು ಪರಾವಲಂಬಿ ಜೀವಿ ಅಳಿಸಿಹಾಕಲು ಸಾಧ್ಯನಾ ಎಂದು ಕೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ