ಐಎಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ ಅವರು ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಖಾಸಗಿ ದೂರು ದಾಖಲಿಸಿದ್ದಾರೆ. ಸಮಕ್ಷ ಪ್ರಾಧೀಕಾರದ ಅನುಮತಿ ಪಡೆಯಬೇಕಿತ್ತು. ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಅದಲ್ಲದೆ ರಾಜ್ಯ ಸರಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದೆ ಎಂದು ಉಲ್ಲೇಖಿಸಿದ್ದಾರೆ.