ರಾಜಧಾನಿ ಗಲಭೆ : ಪೋಸ್ಟ್ ಬರೆಯಬೇಕಾದರೆ ಹೀಗೆ ಮಾಡಿ ಎಂದ ಡಿಸಿಎಂ

ಬುಧವಾರ, 12 ಆಗಸ್ಟ್ 2020 (18:02 IST)
ರಾಜಧಾನಿಯ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಉಂಟಾಗಿರುವ ಗಲಭೆ ಕುರಿತು ಉಪಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ.


ಯಾವುದೇ ಧರ್ಮ ಅಥವಾ ಧರ್ಮ ಗುರುವಿನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವುದು ಸರಿಯಲ್ಲ. ಜಾಲತಾಣಗಳಲ್ಲಿ ಏನಾದರೂ ಬರೆಯುವ ಮುನ್ನ ಸಾಕಷ್ಟು ಸಂಯಮ ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಿಸಿಎಂ  ಅಶ್ವತ್ಥನಾರಾಯಣ ಹೇಳಿದ್ದಾರೆ.  

ಗಲಭೆ ನಡೆದಿರೋದು ಅತ್ಯಂತ ದುರದೃಷ್ಟಕರ ಎಂದಿರುವ ಡಿಸಿಎಂ, ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ