ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ಬರುವಾಗ ಕಾರು ಅಪಘಾತ; ಐವರು ಸಜೀವ ದಹನ

ಶನಿವಾರ, 14 ಸೆಪ್ಟಂಬರ್ 2019 (13:04 IST)
ಬೆಂಗಳೂರು : ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ವಾಪಾಸ್ಸಾಗುವಾಗ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಕಾರ್ ನಲ್ಲಿದ್ದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದಲ್ಲಿ ನಡೆದಿದೆ.



ಜಾಹ್ನವಿ, ಕಲಾ, ಪವನ್‌, ಸಾಯಿ ಆಶ್ರಿತ್ ಹಾಗೂ ರಾಮ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷ್ಣು ಎಂಬಾತ ಪ್ರಾಣಾಪಾಯದಿಂದ ಪಾರಿಗಿದ್ದಾನೆ. ಬೆಂಗಳೂರಿನಲ್ಲಿ ವಾಸಿವಾಗಿರುವ ಈ ಕುಟುಂಬದವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ಬರುತ್ತಿರುವಾಗ ಎರ್ಟಿಗಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ತಕ್ಷಣ ಬೆಂಕಿ ಹೊತ್ತಿಕೊಂಡಿದೆ.

 

ಪರಿಣಾಮ ಅದರಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ, ಪ್ರಕರಣ ದಾಖಲಿಸಿಕೊಂಡಿರುವ ಗಂಗಾವರಂ  ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಸದ್ಯ ಮೃತದೇಹಗಳನ್ನು ಆಸ್ಪತ್ರಗೆ ರವಾನಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ